ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ವಿಟ್ಲ KSRTC ಬಸ್ ನಿಲ್ದಾಣದ ಬಳಿ ನಡೆದಿದೆ.
ಇಂದು ಬೆಳಿಗ್ಗೆ, ವಿಟ್ಲ KSRTC ಬಸ್ ನಿಲ್ದಾಣದ ಬಳಿ ,( KA.19.EY.3655 ) ನಂಬರಿನ ದ್ವಿಚಕ್ರ ವಾಹನವನ್ನು ಅದರ ಸವಾರ ಅಜಾಗರುಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು, ಮುಂದಿನಿಂದ ಹೋಗುತ್ತಿದ್ದ, ಗಣೇಶ್ ರವರ ಮೋಟಾರ್ ಸೈಕಲ್ ಗೆ (KA.19.EG.2717) ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಎರಡು ಬೈಕ್ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದಿದ್ದಾರೆ.
ಸ್ಥಳದಲ್ಲಿದ್ದ ವಿಟ್ಲ ಕಸಬಾ ಗ್ರಾಮ, ಬಂಟ್ವಾಳ ನಿವಾಸಿ ರೋಶನ್ ಕುಮಾರ್.ಕೆ ಮತ್ತು ಇತರರು ಸವಾರರನ್ನು ಉಪಚರಿಸಿ ಗಣೇಶ್ ಹಾಗೂ ಇನ್ನೋರ್ವ ದ್ವಿಚಕ್ರ ವಾಹನ ಸವಾರನಿಗೂ ಗಾಯವಾಗಿದ್ದು, ಗಾಯಾಳುಗಳನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕಳುಹಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಗಣೇಶ್ ರವರನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಾಸಲಾಗಿದೆ.
ರೋಶನ್ ಕುಮಾರ್.ಕೆ ಎಂಬವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 66/2024, ಕಲಂ: 279,337 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.