Sunday, June 29, 2025
spot_imgspot_img
spot_imgspot_img

ಕಡಬ: ಹೊಸ ಕಾರು ಖರೀದಿಸಿ ಪುಣ್ಯಕ್ಷೇತ್ರ ಭೇಟಿ ನೀಡಿ ಹಿಂತಿರುವಾಗ ಅಪಘಾತ :ಬೆಳ್ತಂಗಡಿ ಮೂಲದ 5 ಮಂದಿಗೆ ಗಾಯ, ಮೂವರು ಗಂಭೀರ

- Advertisement -
- Advertisement -

ಕಡಬ: ಟ್ರಕ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಬೆಳಿಗ್ಗೆ ಗುಂಡ್ಯ ಬಳಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ನಿವಾಸಿ ಯೋಗೀಶ್ ಗೌಡ ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಕಾರೊಂದನ್ನು ಖರೀದಿಸಿದ್ದು ಅದರಲ್ಲಿ ತಿರುಪತಿ ಹಾಗೂ ಇತರ ದೇವಸ್ಥಾನಕ್ಕೆ ಭೇಟಿ ನೀಡಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ . ಕಾರಿನಲ್ಲಿ ಹರೀಶ್, ಲೋಕೇಶ್, ಯೋಗೀಶ್ ಗೌಡ, ಹಾಗೂ ಚಾಲಕನ ಪತ್ನಿ ಮಗಳು ಇದ್ದರು ಎಂದು ತಿಳಿದು ಬಂದಿದೆ. ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

- Advertisement -

Related news

error: Content is protected !!