Saturday, May 4, 2024
spot_imgspot_img
spot_imgspot_img

ಆಕಸ್ಮಿಕ ಬೆಂಕಿ ಅವಘಡ; ಒಂದೇ ಮನೆಯ ಮೂವರು ಸಜೀವ ದಹನ

- Advertisement -G L Acharya panikkar
- Advertisement -

ಶಿವಮೊಗ್ಗ: ಆಕಸ್ಮಿಕ ಬೆಂಕಿ ಅವಘಡದಿಂದ ಒಂದೇ ಮನೆಯ ಮೂವರು ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಬಳಿ ನಡೆದಿದೆ.

ಗಣಪತಿ ಕಟ್ಟೆ ರೈಸ್ ಮಿಲ್ ಎದುರು ಕಲ್ಲೋಣಿಯ ಅರ್ಚಕ ರಾಘವೇಂದ್ರ ಕೆಕೋಡ್ ಅವರ ಮನೆಗೆ ಬೆಂಕಿ ತಗುಲಿ ಮೂವರು ಸಜೀವ ದಹನವಾಗಿ ಓರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಕಿ ಅವಘಡದಿಂದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!