- Advertisement -
- Advertisement -
ಆಕಸ್ಮಿಕವಾಗಿ ತಂದೆಯ ಕಾರು ಹರಿದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದೆ.
ಶೈಜಾ ಜನ್ನತ್ (1.5)ಮೃತ ಕಂದಮ್ಮ.
ಏಪ್ರಿಲ್ 21ರ ರಾತ್ರಿ ಘಟನೆ ನಡೆದಿದ್ದು, ಸಂಬಂಧಿಗಳ ಮದುವೆಗೆ ಎಂದು ಚನ್ನಪಟ್ಟಣಕ್ಕೆ ಹೋಗಿದ್ದ ಕುಟುಂಬ ವಾಪಸ್ ಆಗಿತ್ತು. ಕಾರಿನಿಂದ ಇಳಿದು ಎಲ್ಲರೂ ಮನೆ ಒಳಗೆ ಹೋಗಿದ್ದರು. ಮಗುವಿನ ತಂದೆ ಕಾರಿನಿಂದ ಲಗೇಜ್ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ಮಗು ತಂದೆಯ ಹತ್ತಿರ ಓಡಿ ಬಂದಿದೆ.
ಕಾರಿನಲ್ಲಿದ್ದ ಲಗೇಜ್ ಮನೆಯೊಳಗೆ ಇಡುತ್ತಿದ್ದಾಗ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು. ಆದರೆ ಇದನ್ನು ತಂದೆ ಗಮನಿಸಿರಲಿಲ್ಲ. ಲಗೇಜ್ ತೆಗೆದು ಕಾರು ಚಾಲನೆ ಮಾಡಿದ ಸಂದರ್ಭ ಆಕಸ್ಮಿಕವಾಗಿ ಕಾರು ಮಗು ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ಬಗ್ಗೆ ಹೆಚ್ಎಸ್ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -