Monday, June 15, 2026
spot_imgspot_img
spot_imgspot_img

ಅರ್ಚಕನಿಗೆ ಉಂಡೆನಾಮ ಹಾಕಿದ ಕಿರಾತಕ; ಬರೋಬ್ಬರಿ 1.7 ಕೋಟಿ ರೂಪಾಯಿ ಗುಳುಂ

- Advertisement -
- Advertisement -

ಬೆಂಗಳೂರು: ಅರ್ಚಕರೊಬ್ಬರಿಗೆ ಇಪ್ಪತ್ತು ತಿಂಗಳಲ್ಲಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ 1.07 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಶೇಷಗಿರಿ ಬಂಧಿತ ಆರೋಪಿ.

ತನಗೆ ಷೇರು ಮಾರುಕಟ್ಟೆಯಲ್ಲಿ ಅನುಭವವಿದೆ. ಹಣವನ್ನು ಡಬಲ್ ಮಾಡಿಕೊಡುವುದಾಗಿ ಅರ್ಚಕ ರಾಘವೇಂದ್ರ ಅಚಾರ್ಯ ಎಂಬವರನ್ನು ಶೇಷಗಿರಿ ನಂಬಿಸಿ ಮೋಸ ಮಾಡಿದ್ದಾನೆ. ಆರೋಪಿ ಶೇಷಗಿರಿ, ಬಿಕಾಂ ಪದವೀಧರನಾಗಿದ್ದು ವಿವಿಧ ಬ್ಯಾಂಕ್ ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದ. ಜೊತೆಗೆ ಷೇರು ಮಾರುಕಟ್ಟೆ ಬಗ್ಗೆಯೂ ಪಂಟರ್ ಆಗಿದ್ದಾನೆ ಎನ್ನಲಾಗಿದೆ.

ಅರ್ಚಕನಿಂದ ಹಂತ ಹಂತವಾಗಿ ಹಣ ಪಡೆದು ಷೇರು ಮಾರುಕಟ್ಟೆಗೆ ಬಳಸಿದ್ದಾನೆ. ಈ ಮೂಲಕ ಬರೋಬ್ಬರಿ 1.7 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದ್ದಾನೆ. ಈ ಹಣವನ್ನು ವಾಪಸ್ ಕೇಳಿದರೆ ಕೊಡದೇ ಸತಾಯಿಸಿದ್ದ. ಆಗ ದೂರು ಕೊಡುತ್ತೇನೆ ಅಂದಾಗ ಮೂವತ್ತು ಲಕ್ಷ ರೂಪಾಯಿ ಕೊಟ್ಟು ಮೊಬೈಲ್ ಸ್ವಿಚ್​ಆಫ್ ಮಾಡಿ ತಲೆಮರೆಸಿಕೊಂಡಿದ್ದಾನೆ.

ಈ ಬಗ್ಗೆ ಬನಶಂಕರಿ ಠಾಣೆಯಲ್ಲಿ ಅರ್ಚಕ ರಾಘವೇಂದ್ರ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 45 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ.

- Advertisement -

Related news

error: Content is protected !!