Friday, July 24, 2026
spot_imgspot_img
spot_imgspot_img

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಜಾಮೀನು ಷರತ್ತು ಉಲ್ಲಂಘನೆ ಪ್ರಕರಣ ದಾಖಲು

ಪುತ್ತೂರು: ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಿಗೆ ಸಂಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಪುತ್ತೂರು ಕಸಬಾ ಗ್ರಾಮದ ನಿವಾಸಿಯಾಗಿರುವ ಅಬ್ಬಾಸ್ ಆಲಿ ಆಲ್ತಾಫ್ (55) ಆಗಿದ್ದು, ಪ್ರಸ್ತುತ ಮಂಗಳೂರು ನಗರದ ಪದವು ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ.

ಆರೋಪಿಯನ್ನು ಮಂಗಳೂರು ಕುಲಶೇಖರದ ಬಿಕರ್ನಕಟ್ಟೆ ಪ್ರದೇಶದಲ್ಲಿ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಫೆಬ್ರವರಿ 27, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದಲ್ಲದೆ, ಈ ಹಿಂದೆ ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2026 ರಂತೆ BNS 2023ರ ಕಲಂ 269 ಅಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!