Sunday, June 29, 2025
spot_imgspot_img
spot_imgspot_img

ಲಾರಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು

- Advertisement -
- Advertisement -

ಕೆ ಎಸ್ ಆರ್ ಟಿ ಸಿ ಹಾಗೂ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ ಬೀದರ್ – ಶ್ರೀರಂಗಪಟ್ಟಣ ರಸ್ತೆಯಲ್ಲಿ ಸಂಭವಿಸಿದೆ.

ಚಳ್ಳಕೆರೆಯಿಂದ ಹಿರಿಯೂರು ಕಡೆಗೆ ಬರುತಿದ್ದ ಕೆಎಸ್ಆರ್‌ಟಿಸಿ ಬಸ್ ಗೆ ಹಿಂದೆ ಬಂದ ಲಾರಿ ಓವರ್ ಟೇಕ್ ಮಾಡುವಾಗ ಈ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿ ಲಾರಿಯ ಚಾಲಕ ಲಾರಿಯೊಂದಿಗೆ ನಾಪತ್ತೆಯಾಗಿದ್ದು, ಈಗಾಗಲೇ ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ, ಲಾರಿ ಹಾಗೂ ಅದರ ಚಾಲಕನ ಪತ್ತೆಗಾಗಿ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!