Thursday, April 25, 2024
spot_imgspot_img
spot_imgspot_img

ಕಮಲ ಮುಡಿದ ಚೆಲುವಿನ ಚಿತ್ತಾರ ಅಮೂಲ್ಯ

- Advertisement -G L Acharya panikkar
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರದ ಉಪ ಚುನಾವಣೆ ಕಳೆಗಟ್ಟುತ್ತಿದೆ. ಇದರ ಬೆನ್ನಲ್ಲೇ ಇಂದು ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವಿಶೇಷ ಅಂದ್ರೆ 2018 ರ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿಯಾಗಿದ್ದ ಅಮೂಲ್ಯ ಅವರ ಮಾವ ಜಿ.ಹೆಚ್.ರಾಮಚಂದ್ರ, ಅಮೂಲ್ಯ ಪತಿ ಜಗದೀಶ್  ಕೂಡ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿಯೇ ಜಿ.ಹೆಚ್ ರಾಮಚಂದ್ರ ಮತ್ತು ಅವರ ಸೊಸೆ ಅಮೂಲ್ಯ ಬಿಜೆಪಿ ಸೇರ್ಪಡೆಯಾಗಿದ್ದಾರೆ.  ಈ ವೇಳೆ  ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕೂಡ ಉಪಸ್ಥಿತರಿದ್ದರು.

- Advertisement -

Related news

error: Content is protected !!