Saturday, June 28, 2025
spot_imgspot_img
spot_imgspot_img

ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ..!

- Advertisement -
- Advertisement -

ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್​ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ.

ಸುಮಾರು 20 ಜನರು ಚೇತನ್​ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಚೇತನ್​ ಚಂದ್ರ ಅವರು ಘಟನೆ ಬಗ್ಗೆ ವಿವರ ನೀಡಿದ್ದಾರೆ. ಹಲ್ಲೆಗೆ ಒಳಗಾದ ಬಳಿಕ ಅವರು ಕಗ್ಗಲಿಪುರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇಂದು (ಮೇ 12) ತಾಯಂದಿರ ದಿನ. ಆ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್​ ಬರುವಾಗ ಚೇತನ್​ ಚಂದ್ರ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಅವರ ಕಾರಿಗೂ ಹಾನಿ ಮಾಡಲಾಗಿದೆ. ಈ ಘಟನೆ ಯಾವ ರೀತಿ ನಡೆಯಿತು ಎಂದು ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ಚೇತನ್​ ಚಂದ್ರ ಅವರು ಮಾಹಿತಿ ನೀಡಿದ್ದಾರೆ.

ಇದು ನನ್ನ ಜೀವನದ ಅತಿ ಕೆಟ್ಟ ಅನುಭವ. ನ್ಯಾಯ ಬೇಕು’ ಎಂದು ಚೇತನ್​ ಚಂದ್ರ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಚೇತನ್​ ಚಂದ್ರ ಅವರು ಇನ್​ಸ್ಟಾಗ್ರಾಮ್​ ಲೈವ್​ ಬಂದು ಹಲ್ಲೆ ಬಗ್ಗೆ ವಿವರಿಸಿದ್ದಾರೆ.

ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್​ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’ ಎಂದು ಚೇತನ್​ ಚಂದ್ರ ಹೇಳಿದ್ದಾರೆ

- Advertisement -

Related news

error: Content is protected !!