Sunday, April 28, 2024
spot_imgspot_img
spot_imgspot_img

ನಟ ಕೆ.ಶಿವರಾಮ್ ನಿಧನ

- Advertisement -G L Acharya panikkar
- Advertisement -

ಹೃದಯಾಘಾತಕ್ಕೆ ಒಳಗಾಗಿ ಕಳೆದ 12 ದಿನಗಳಿಂದ ಸಂಪಂಗಿರಾಮ ನಗರದ ಹೆಚ್‌ಜಿಎಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು.

- Advertisement -

Related news

error: Content is protected !!