- Advertisement -
- Advertisement -
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಮಾದಕ ದ್ರವ್ಯ ಪ್ರಕರಣದಲ್ಲಿ ಜೈಲಿನಲ್ಲಿರುವಾಗಲೇ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈಕೆಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾಣಿವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್ಗೆ ವರದಿ ಸಲ್ಲಿಸಿದ್ದಾರೆ.
ಈ ಕಾರಣಕ್ಕಾಗಿ ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಅರ್ಜಿ ವಿಚಾರಣೆಯಾಗಿದೆ.ಆದರೆ ವಿಚಾರಣೆಯಲ್ಲಿ ಸದ್ಯಕ್ಕೆ ಔಷಧಿಯಲ್ಲೇ ಚಿಕಿತ್ಸೆ ಮುಂದುವರಿಯಬಹುದು. ಅಗತ್ಯ ಬಿದ್ದರೆ ಮಾತ್ರ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ತಿಳಿಸಲಾಗಿದೆ. ಈ ವಿಷಯದಿಂದಾಗಿ ವಿಚಾರಣೆ ಮುಂದುವರಿದಿದೆ.
- Advertisement -