Friday, May 3, 2024
spot_imgspot_img
spot_imgspot_img

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಚಿಕಿತ್ಸೆ ಫಲಿಸದೇ ನಿಧನ

- Advertisement -G L Acharya panikkar
- Advertisement -

ಅಮೃತವರ್ಷಿಣಿ ಧಾರಾವಾಹಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು(71) ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ.

ಕನ್ನಡದ ಹಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಹೃದಯ-ಹೃದಯ, ನೀಲ, ನಮ್ಮೆಜಮಾನ್ರು, ಅಮೃತವರ್ಷಿಣಿ ಸಿನಿಮಾದಲ್ಲಿಯೂ ನಟಿಸಿದ್ದಾರೆ. ತೆಲುಗು, ತಮಿಳಿನಲ್ಲಿ ಚಿರಂಜೀವಿ, ಕಮಲ್ ಹಾಸನ್ ಇನ್ನೂ ಹಲವು ಮೇರು ಕಲಾವಿದರೊಟ್ಟಿಗೆ ಶರತ್ ಬಾಬು ನಟಿಸಿದ್ದಾರೆ.

ಇತ್ತೀಚೆಗೆ ಶರತ್ ಬಾಬು ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಕೊನೆಯದಾಗಿ ಶರತ್ ಬಾಬು ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. 1974ರಲ್ಲಿ ರಮಾ ಪ್ರಭ ಜೊತೆ ವಿವಾಹವಾಗಿದ್ದ ಶರತ್ ಬಾಬು 1988ರಲ್ಲಿ ವಿಚ್ಛೇದನ ಪಡೆದು ದೂರ ಆದರು. ಬಳಿಕ 1990ರಲ್ಲಿ ಸ್ನೇಹ ನಂಬಿಯಾರ್ ಜೊತೆ 2ನೇ ವಿವಾಹವಾದರು. ಆದರೆ 2011ರಲ್ಲಿ ಸ್ನೇಹ ಅವರಿಂದನೂ ದೂರ ಆದರು. ಒಂಟಿಯಾಗಿದ್ದ ಶರತ್ ಬಾಬು ಇತ್ತೀಚೆಗಷ್ಟೆ ಪತ್ರಕರ್ತೆಯೊಬ್ಬರನ್ನು ಮದುವೆಯಾಗಿದ್ದಾರೆ ಎಂಬ ಸುದ್ದಿಯೂ ಇದೆ. 

- Advertisement -

Related news

error: Content is protected !!