ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸ್ಟಾರ್ ಹೀರೋ ಮಗನಿಂದ ಎದುರಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಎಷ್ಟು ಕೋಟಿ ಬೇಕಾದರೂ ಕೊಡುತ್ತೇನೆ ಎಂದು ಚಿತ್ರಹಿಂಸೆ ಮಾಡುತ್ತಿದ್ದಾರಂತೆ.
ಕರ್ನಾಟಕ ಮೂಲದ ತೆಲುಗು ನಟಿ ಕೃತಿ ಶೆಟ್ಟಿ ಟಾಲಿವುಡ್ನಲ್ಲಿ ಸಿಕ್ಕಾಪಟ್ಟೆ ಬೇಡಿಕೆಯ ನಟಿಯಾಗಿದ್ದಾರೆ. ಉಪ್ಪೇನಾ ಸಿನಿಮಾ ಮೂಲಕ ಮೊದಲ ಬಾರಿಗೆ ತೆರೆಮೇಲೆ ಮಿಂಚಿದ ಕೃತಿ ಚೊಚ್ಚಲ ಸಿನಿಮಾದಲ್ಲೇ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸುಂದರ ನಟಿ ಕೃತಿ ಸಿನಿಮಾ ಜೊತೆಗೆ ಆಗಾಗ ಫೋಟೋಶೂಟ್ ಮೂಲಕವೂ ಸದ್ದು ಮಾಡುತ್ತಿರುತ್ತಾರೆ. ಉಪ್ಪೇನಾ ಬಳಿಕ ಬಂದ ಕೃತಿ ಸಿನಿಮಾಗಳು ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಆದರೂ ಕೃತಿಗೆ ಬೇಡಿಕೆ ಕಡಿಮೆಯಾಗಿಲ್ಲ. ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸ್ಟಾರ್ ನಟನ ಮಗ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ವೈರಲ್ ಆಗಿದೆ. ಎಷ್ಟು ಕೋಟಿಯಾದರೂ ಕೊಡುತ್ತೇನೆ ಬಾ ಎಂದು ಟಾರ್ಚರ್ ಮಾಡುತ್ತಿದ್ದಾರಂತೆ.
ಬುಚ್ಚಿಬಾಬು ನಿರ್ದೇಶನದ ಉಪ್ಪೇನಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಈ ಸಿನಿಮಾದಲ್ಲಿ ಕೃತಿ ಜೊತೆ ನಾಯಕನಾಗಿ ಪಂಜ ವೈಷ್ಣವ್ ತೇಜ್ ನಟಿಸಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಮೊದಲ ಸಿನಿಮಾವೇ ಕೃತಿಗೆ ದೊಡ್ಡ ಹೆಸರು ತಂದುಕೊಟ್ಟಿತು. ಆದರೆ ಬಳಿಕ ಬಂದ ಸಿನಿಮಾಗಳು ಅಷ್ಟು ದೊಡ್ಡ ಸಕ್ಸಸ್ ಕಾಣುವಲ್ಲಿ ವಿಫಲವಾಗಿವೆ. ಮತ್ತೊಂದು ಸೂಪರ್ ಸಕ್ಸಸ್ಗಾಗಿ ಕಾಯತ್ತಿರುವ ಕೃತಿಗೆ ಸ್ಟಾರ್ ಹೀರೋ ಒಬ್ಬರ ಮಗ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಸ್ಟಾರ್ ಹೀರೋ ಮಗನೊಬ್ಬ ಕೃತಿ ಶೆಟ್ಟಿ ಹಿಂದೆ ಬಿದ್ದಿದ್ದಾರಂತೆ. ಹೇಗಾದರೂ ಮಾಡಿ ಕೃತಿ ಶೆಟ್ಟಿ ಜೊತೆ ಸ್ನೇಹ ಬೆಳೆಸುವಂತೆ ಕಿರುಕುಳ ನೀಡುತ್ತಿದ್ದಾನಂತೆ. ಪ್ರತಿ ಕಾರ್ಯಕ್ರಮದಲ್ಲೂ ಕೃತಿ ಶೆಟ್ಟಿ ಜೊತೆಯೇ ಓಡಾಡಿ ತೊಂದರೆ ಕೊಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಇತ್ತೀಚೆಗಷ್ಟೆ ಕೃತಿ ಶೆಟ್ಟಿಗೆ ಫೋನ್ ಮಾಡಿ ಶೂಟಿಂಗ್ ನಿಲ್ಲಿಸಿ ಬರುವಂತೆ ಒತ್ತಾಯ ಮಾಡಿದ್ದರಂತೆ. ಎಷ್ಟು ಕೋಟಿ ಬೇಕಾದರೂ ಕೊಡುತ್ತೇನೆ ಪಾರ್ಟಿಗೆ ಬರುವಂತೆ ಚಿತ್ರಹಿಂಸೆ ನೀಡಿದ್ದರಂತೆ. ಈ ಬಗ್ಗೆ ನಟಿ ಕೃತಿ ಇತ್ತೀಚಿಗಷ್ಟೆ ಸಂದರ್ಶನವೊಂದರಲ್ಲಿ ಬಹಿರಂಗ ಪಡಿಸಿದ್ದರು ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಆದರೆ ಕೃತಿ ಯಾವುದೇ ಪಾರ್ಟಿಗೂ ಹೋಗಲ್ಲ ಎಂದು ಫೋನ್ ಕಟ್ ಮಾಡಿ ಸೈಲೆಂಟ್ ಆದರಂತೆ. ಕೃತಿ ಶೆಟ್ಟಿಗೆ ಟಾರ್ಚರ್ ಮಾಡುತ್ತಿರುವ ಸ್ಟಾರ್ ಹೀರೋ ಮಗ ಯಾರು? ತೆಲುಗು ನಟನ ಮಗನ ಅಥವಾ ತಮಿಳು ನಟನ ಮಗನ ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ. ಕೃತಿಯನ್ನು ಬೆಂಬಿಡದೇ ಕಾಡುತ್ತಿರುವ ಆ ವ್ಯಕ್ತಿ ಯಾರು ಎಂದು ತಿಳಿದುಕೊಳ್ಳಲು ಅಭಿಮಾನಿಗಳು ಹರಸಾಹಸ ಪಡುತ್ತಿದ್ದಾರೆ.