- Advertisement -
- Advertisement -
ಬೆಂಗಳೂರು: ಕೊರೊನ ಎರಡನೇ ಅಲೆಯ ಅಬ್ಬರಕ್ಕೆ ಜನ ತತ್ತರಿಸಿ ಹೋಗ್ತಿದ್ದಾರೆ. ಅದೆಷ್ಟೋ ಜನ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ನರಳಾಡಿ ಪ್ರಾಣ ತೆರಳುತ್ತಿದ್ದಾರೆ.
ಕೊರೊನಾ ಪರಿಹಾರ ನಿಧಿಗಾಗಿ ಅದೆಷ್ಟೋ ಜನ ಪಿಎಂ ಕೇರ್ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಫಂಡ್ ನೀಡ್ತಿದ್ದಾರೆ. ಸದ್ಯ ನಟಿ ತಾರಾ 25 ಲಕ್ಷ ರೂಪಾಯಿ ಚೆಕ್ ಅನ್ನ ಮುಖ್ಯಮಂತ್ರಿ ಬಿ.ಎಸ್ ಉಡಿಯೂರಪ್ಪ ಕೈಗೆ ಹಸ್ತಾಂತರಿಸಿದ್ದಾರೆ.
ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ. ನಟಿ ತಾರಾ ಅನುರಾಧ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದು, ಈ ಚೆಕ್ ಅನ್ನ ಮುಖ್ಯಮಂತ್ರಿಗಳಿಗೆ ಇಂದು ಹಸ್ತಾಂತರಿಸಿದ್ದಾರೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
- Advertisement -