- Advertisement -
- Advertisement -
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವರ ಹೆಬ್ಬಾಳದಲ್ಲಿರುವ “House of Life” ಮನೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಮನೆಯ ಪ್ರತಿಯೊಂದು ಭಾಗವನ್ನೂ ಶೋಧಿಸತೊಡಗಿದ್ದಾರೆ.
ನಗರದ ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವ ಮನೆಗೆ ಸಿಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಸರ್ಚ್ ವಾರಂಟ್ ಪಡೆದಿರುವ ಸಿಸಿಬಿ ಪೊಲೀಸರು ಮನೆಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಸಿಸಿಬಿ ಪೊಲೀಸರು ಅಲ್ಲಿಗೆ ತೆರಳಿದ ವೇಳೆ ಮನೆಯ ಸದಸ್ಯರು ಯಾರೂ ಇರಲಿಲ್ಲ. ಮನೆಗೆಲಸದವರು ಮಾತ್ರ ಇದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.
ಮಾಜಿ ಸಚಿವ ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಅವರ ಪುತ್ರನಾಗಿರುವ ಆದಿತ್ಯ ಆಳ್ವ ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಎ6 ಆರೋಪಿಯಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರದಲ್ಲಿ ಆದಿತ್ಯ ಆಳ್ವ ಕುಟುಂಬ ನಾಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಸಿಸಿಬಿ ಇಂದು ರೈಡ್ ಮಾಡಿ ಪರಿಶೀಲನೆ ನಡೆಸುತ್ತಿದೆ.
- Advertisement -