- Advertisement -
- Advertisement -
ಹುಬ್ಬಳ್ಳಿ: ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಹವಾಮಾನ ವೈಪರಿತ್ಯದಿಂದಾಗಿ ಲ್ಯಾಂಡ್ ಮಾಡಲಾಗದೆ ಆಕಾಶದಲ್ಲೇ ಕೆಲಕಾಲ ಹಾರಾಟ ನಡೆಸಬೇಕಾಯಿತು. ಇದರಿಂದ ಕೆಲಕಾಲ ಆತಂಕ ವಾತಾವರಣವೂ ಸೃಷ್ಟಿಯಾಗಿತ್ತು.
ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ವಿಮಾನ ಬೆಳಗ್ಗೆ 8:55 ಗಂಟೆಗೆ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ವಿಮಾನವು ಟವರ್ ಸಿಗ್ನಲ್ ದೊರೆಯದ್ದಕ್ಕೆ ಆಕಾಶದಲ್ಲಿ ಸುತ್ತಾಟ ನಡೆಸಿತು. ಕೊನೆಗೆ 10.25ರ ವೇಳೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ವೇಳೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ವರದಿಯಾಗಿದೆ.ಒಂದು ವೇಳೆ ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ಸಾಧ್ಯವಾಗದೇ ಹೋದಲ್ಲಿ ಗೋವಾ ಅಥವಾ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವ ಬಗ್ಗೆ ಯೋಚನೆ ಮಾಡಲಾಗಿತ್ತು. ಆದರೆ ಸಿಗ್ನಲ್ ದೊರೆತ ಕಾರಣ 10.25ರ ವೇಳೆ ಸುರಕ್ಷಿತ ಲ್ಯಾಂಡಿಂಗ್ ಸಾಧ್ಯವಾಗಿದೆ.
- Advertisement -