Tuesday, April 29, 2025
spot_imgspot_img
spot_imgspot_img

ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ : ಆರು ಜನ ಕಾರ್ಮಿಕರಿಗೆ ಗಾಯ

- Advertisement -
- Advertisement -

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್​ ಆಗಿ, ಆರು ಜನ ಕಾರ್ಮಿಕರು ಗಾಯಗೊಂಡ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

ಗಾಯಾಳುಗಳನ್ನು ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿ ಹಾಗೂ ಬಸವರಾಜ್ ಎಂದು ಗುರುತಿಸಲಾಗಿದೆ.

ಗಾಯಾಳುಗಲಾದ ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿಯನ್ನು ಹಟ್ಟಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕ ಬಸವರಾಜ್​ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ (ಏ.18) ರಂದು ಬೆಳಿಗ್ಗೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದು, ಸುರುಂಗದೊಳೆಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಪೂರೈಸಲಾಗುತ್ತಿದ್ದ ಆಮ್ಲಜನಕದ ಗ್ಯಾಸ್ ಮಧ್ಯಾಹ್ನದ ಹೊತ್ತಿಗೆ ​ಬ್ಲಾಕ್​ ಆಗಿ, ಸ್ಫೋಟಗೊಂಡಿದೆ. ಇದರಿಂದ ಏಕಾಏಕಿ ಒಂದು ಬದಿಯ ಮಣ್ಣು ಕುಸಿದಿದೆ. ಈ ವೇಳೆ ಉಸಿರಾಟದ ಸಮಸ್ಯೆಯಿಂದ ಕಾರ್ಮಿಕರು ಸುರಂಗದಲ್ಲೇ ಕುಸಿದಿದ್ದಾರೆ. ಕೂಡಲೆ ಆರು ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!