Sunday, June 29, 2025
spot_imgspot_img
spot_imgspot_img

ಏರ್ ಇಂಡಿಯಾ ವಿಮಾನ ದುರಂತ: ವಿಮಾನದ ಸೀಟ್ ನಂ.11A ನಲ್ಲಿ ಕುಳಿತಿದ್ದ ವ್ಯಕ್ತಿ ಎಮರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣಪಾಯದಿಂದ ಪಾರು

- Advertisement -
- Advertisement -

ಅಹ್ಮದಾಬಾದ್‌: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏ‌ರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್‌ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ನಾಗರಿಕರು, ಓರ್ವ ಕೆನಡಾ ಪ್ರಜೆ ಮತ್ತು ಏಳು ಪೋರ್ಚುಗೀಸ್ ನಾಗರಿಕರು ಹಾಗೂ ವಿಮಾನದ ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರಿದ್ದು ಎಲ್ಲರೂ ಸಜೀವದಹನವಾಗಿದ್ದಾರೆ. ಆದರೆ ಪವಾಡ ಸದೃಶ್ಯ ಪ್ರಯಾಣಿಕನೊಬ್ಬ ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪಾರಾಗಿದ್ದಾನೆ ಎಂಬ ಸುದ್ದಿ ಬಂದಿದೆ.

ರಮೇಶ್‌ ವಿಶ್ವಾಸ್ ಕುಮಾರ್ ಬುಚರ್ವಾಡಾ ಬದುಕುಳಿದ ಪ್ರಯಾಣಿಕ ಎಂದು ತಿಳಿದು ಬಂದಿದೆ. ಅವರು 11A ಸೀಟಿನಲ್ಲಿ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ರಮೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಹ್ಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

- Advertisement -

Related news

error: Content is protected !!