Thursday, April 18, 2024
spot_imgspot_img
spot_imgspot_img

*ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಕರೆ ನೀಡಿದ ವ್ಯಕ್ತಿಯ ಬಂಧನ*

- Advertisement -G L Acharya panikkar
- Advertisement -

ಮಂಗಳೂರು: ನಗರದ ಹೊರವಲಯದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಬಾಂಬ್ ಇದೆ ಎಂದು ಬೆದರಿಕೆ ಕರೆ ನೀಡಿದ್ದ ವ್ಯಕ್ತಿಯ ಬಂಧನವಾಗಿದೆ.

ಕಾರ್ಕಳ ತಾಲೂಕು ಮುದ್ರೊಡಿ ಗ್ರಾಮದ ಬಲ್ಲಾಡಿ ತುಂಡುಗುಡ್ಡೆ ನಿವಾಸಿ ವಸಂತ್ (33) ಆರೋಪಿ.

ಆರೋಪಿ ಮಂಗಳೂರಿನ ಹೋಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಹೆಬ್ರಿ ಮತ್ತು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯ ಬಂಧನವಾಗಿದೆ. ವಿಚಾರಣೆ ವೇಳೆ ಈತ ಮಾನಸಿಕ ಅಸ್ವಸ್ಥ ಅಂತಾ ತಿಳಿದು ಬಂದಿದೆ.

- Advertisement -

Related news

error: Content is protected !!