- Advertisement -
- Advertisement -
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಚಿನ್ನದ ಬೇಟೆ ನಡೆಸಲಾಗಿದೆ. ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ತರಲಾಗಿದ್ದ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಕೊರಿಯರ್ ಮೂಲಕ ಚಿನ್ನ ಕಳ್ಳ ಸಾಗಾಟ ಮಾಡಲಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಾರ್ಸೆಲ್ ಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ.
ಇದೇ ವೇಳೆ ಕೇರಳದ ಕೋಝಿಕೋಡ್ ನಲ್ಲಿ ಕೂಡ ಅಧಿಕಾರಿಗಳು ಚಿನ್ನ ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರ ಬಳಿ ಇದ್ದ 1. 6 ಕಿಲೋ ಮತ್ತು 87 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ..
ಇದರ ಮೌಲ್ಯ ಅನುಕ್ರಮವಾಗಿ 77 ಲಕ್ಷ ಮತ್ತು 4. 2 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
- Advertisement -