- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ , ಪುತ್ತೂರು ಪರಿಸರದ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಏರ್ಟೆಲ್ ನೆಟ್ವರ್ಕ್ ಸಮಸ್ಯೆಯು ಬಳಕೆದಾರರಿಗೆ ತೀವ್ರ ಸಮಸ್ಯೆಯನ್ನುಂಟು ಮಾಡುತ್ತಿದ್ದು, ಗ್ರಾಹಕರು ಪರದಾಡುವಂತಹ ಸ್ಥಿತಿ ಎದುರಾಗಿದೆ.
ವಿಟ್ಲ ಪುತ್ತೂರು ಪರಿಸರದಲ್ಲಿ ಕಳೆದ ಕೆಲ ತಿಂಗಳಿನಿಂದ ಏರ್ಟೆಲ್ ಸಿಮ್ ಬಳಕೆದಾರರು ನೆಟ್ವರ್ಕ್ಗಾಗಿ ಪರದಾಡುತ್ತಿದ್ದು, ನೆಟ್ವರ್ಕ್ ತೀವ್ರ ನಿಧಾನಗತಿಯಲ್ಲಿ ಕೆಲಸ ಮಾಡುತ್ತಿದೆ. ಇದರಿಂದ ಅವಶ್ಯಕ ತುರ್ತು ಸಂದರ್ಭಗಳಲ್ಲಿ ಫೋನ್ ಕಾಲ್ ಮಾಡಲು ಜನರು ಪರದಾಡುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಆದಷ್ಟು ಬೇಗನೆ ನೆಟ್ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರು ವಿನಂತಿಸಿಕೊಂಡಿದ್ದಾರೆ.
- Advertisement -