Monday, June 30, 2025
spot_imgspot_img
spot_imgspot_img

ಕಲ್ಲಡ್ಕ: (ಆ.13) ಹಿಂದು ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ವಾಹನ ಜಾಥಾ ಕಾರ್ಯಕ್ರಮ

- Advertisement -
- Advertisement -

ಕಲ್ಲಡ್ಕ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ವಾಹನ ಜಾಥಾ ಕಾರ್ಯಕ್ರಮವು ಆ.13ರಂದು ಸಂಜೆ 4ಗಂಟೆಗೆ ಉಮಾಶಿವ ದೇವಸ್ಥಾನ ಗೇರುಕಟ್ಟೆ ಕಲ್ಲಡ್ಕದಲ್ಲಿ ನಡೆಯಲಿದೆ.

1947ರ ಆ.14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತಾ ಕಳೆದು ಹೋದ ಭಾಗಗಳೆಲ್ಲವನ್ನೂ ಮತ್ತೆ ಒಂದು ಗೂಡಿಸುವ ಸಲುವಾಗಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಚರಿಸುತ್ತಿದ್ದು, ಮಾಣಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಮೆಲ್ಕಾರು ರಾಮದೇವ ಸಭಾಭವನ ಹಾಗೂ ವೀರಕಂಭ ಶಾರದಾ ಭಜನಾ ಮಂದಿರ ಬಳಿಯಿಂದ ಏಕಕಾಲಕ್ಕೆ ವಾಹನಜಾಥಾವು ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ನಾಗೇಶ್ ಕಲ್ಲಡ್ಕ ವಹಿಸಲಿದ್ದು, ದಿಕ್ಸೂಚಿ ಭಾಷಣವನ್ನು ವಿಶ್ವ ಹಿಂದೂ ಪರಿಷತ್ತು ಪ್ರಾಂತ ಕಾರ್ಯಕಾರಿಣಿ ಸದಸ್ಯ ರಘು ಸಕಲೇಶಪುರ ಮಾಡಲಿದ್ದಾರೆ.

- Advertisement -

Related news

error: Content is protected !!