- Advertisement -
- Advertisement -
ಬೆಂಗಳೂರು: ಬೀದಿ ಫಲಕಗಳ ಮೇಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಶ್ಯಾಂಪುರ ಮುಖ್ಯರಸ್ತೆಯಲ್ಲಿರುವ ಡಿಕೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ.
ಶಾಸಕರ ಮೇಲಿರುವ ದ್ವೇಷದಿಂದ ಗಲಭೆ ನಂತರ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
- Advertisement -