Sunday, May 5, 2024
spot_imgspot_img
spot_imgspot_img

ಅಳಕೆ ಮಜಲು ಶಾರದಾಂಬಾ ಭಜನಾ ಮಂದಿರದಲ್ಲಿ ಆಯಷ್ಮಾನ್ ಕಾರ್ಡ್ ನೋಂದಾವಣೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಮಾಣಿ ವಲಯದ ಅಳಕೆ ಮಜಲು ಶಾರದಾಂಬಾ ಭಜನಾ ಮಂದಿರದಲ್ಲಿ ಆಯಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ತಿರುಮಲೇಶ್ವರ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ತಾಲ್ಲೂಕು ಯೋಜನಾಧಿಕಾರಿಯಾದ ಮೋಹನ್ ಕೆ ಅವರು ನೆರವೇರಿಸಿ ಆಯುಷ್ಮಾನ್ ಕಾರ್ಡ್ ನ ಉಪಯೋಗ ಮತ್ತು ಮಹತ್ವದ ಬಗ್ಗೆ ಮಾಹಿತಿ ತಿಳಿಸಿದರು ಹಾಗೂ ಮುಖ್ಯ ಅತಿಥಿಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯರಾದ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಅವರು ಮಾತನಾಡಿ ಕಾರ್ಯಕ್ರಮದ ಉಪಯುಕ್ತತೆಯ ಕೊರೊನ ರೋಗದ ಜಾಗೃತಿಯ ಬಗ್ಗೆ ಮಾಹಿತಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾರದಾಂಬಾ ಭಜನಾ ಮಂದಿರದ ಅಧ್ಯಕ್ಷರಾದ ಕೃಷ್ಣಪ್ಪ ಸಫಲ್ಯ ಆಡಳಿತ ಸಮಿತಿ ಸದಸ್ಯರಾದ ಜಗದೀಶ್ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಜ್ಞಾನವಿಕಾಸ ತಾಲ್ಲೂಕು ಸಮನ್ವಯಾಧಿಕಾರಿ ನಳಿನಾಕ್ಷಿ ಶೆಟ್ಟಿ ನಿರೂಪಿಸಿ ವಲಯ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿ ಸೇವಾ ಪ್ರತಿನಿಧಿ ಸುಗಂಧಿನಿ ವಂದಿಸಿದರು. ಕುಮಾರಿ ಗಹನ ವರ್ಣಿಕ ಪ್ರಾರ್ಥಿಸಿದರು.

- Advertisement -

Related news

error: Content is protected !!