Friday, April 19, 2024
spot_imgspot_img
spot_imgspot_img

ಅಳಿಕೆ ಗಂಗಾಧರ ಭಟ್ ನಿಧನಕ್ಕೆ ಮಾಜಿ ಸಚಿವ ರಮಾನಾಥ ರೈ ಸಂತಾಪ

- Advertisement -G L Acharya panikkar
- Advertisement -

ಬಂಟ್ವಾಳ: ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಬೆಳಗ್ಗಿನ ಜಾವ ನಿಧನರಾಗಿದ್ದು, ಅವರ ಅಗಲಿಕೆ ತೀವ್ರ ನೋವು ತಂದಿದ್ದು, ಓರ್ವ ದೂರದೃಷ್ಟಿಯ ಶಿಕ್ಷಣ ತಜ್ಞ ರನ್ನು ಕಳೆದಕೊಂಡಿದ್ದೇವೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಭಟ್, ಅಳಕೆಯಂಥ ಹಳ್ಳಿಯಲ್ಲಿ ಶಿಕ್ಷಣ ಮತ್ತು ಆಧ್ಯಾತ್ಮಿಕ ಚಿಂತನೆಯನ್ನು ಒದಗಿಸುವ ಶಿಕ್ಷಣ ಸಂಸ್ಥೆ ಹುಟ್ಟುಹಾಕಿದ್ದರು ಎಂದಿದ್ದಾರೆ. ಅವರೊಂದಿಗಿನ ಒಡನಾಟವನ್ನು ನೆನಪಿಸಿದ ರೈ ಅವರು ವಿದ್ಯಾಸಂಸ್ಥೆ ಯ ಪ್ರತಿಯೊಂದು ಚಟುವಟಿಕೆಗಳ ಕಾರ್ಯಕ್ರಮಗಳಲ್ಲಿ ತಾನು ಭಾಗಿಯಾಗಿದ್ದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!