Saturday, April 27, 2024
spot_imgspot_img
spot_imgspot_img

ಮಂಗಳೂರು: ಅಮರ ಸುಳ್ಯ ಸ್ವಾತಂತ್ರ್ಯ ಸಮರ -1837 ಸಂಸ್ಮರಣಾ ದಿನ

- Advertisement -G L Acharya panikkar
- Advertisement -

ಮಂಗಳೂರು: ಒಕ್ಕಲಿಗ ಗೌಡ ಸೇವಾ ಸಂಘ ಮಂಗಳೂರು ಹಾಗೂ ಮಹಿಳಾ ಘಟಕ ಮತ್ತು ಯುವ ಘಟಕ ಸಹಯೋಗದಲ್ಲಿ ಏಪ್ರಿಲ್ 5ರಂದು “ಅಮರ ಸುಳ್ಯ ಸ್ವಾತಂತ್ರ್ಯ ಸಮರ-1837 ಸಂಸ್ಮರಣಾ ದಿನ” ಕಾರ್ಯಕ್ರಮ ಬಾವುಟ ಗುಡ್ಡೆ ಠಾಗೋರ್ ಉದ್ಯಾನವನ ಮಂಗಳೂರಿನಲ್ಲಿ ನಡೆಯಿತು.

ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರನ್ನು ಮಂಗಳೂರಿನಿಂದ ಹೊಡೆದೋಡಿಸಿ, ಬಾವುಟಗುಡ್ಡೆಯಲ್ಲಿ ಬ್ರಿಟಿಷ್ ಧ್ವಜವನ್ನು ಕಿತ್ತೊಗೆದು ಸ್ವಾತಂತ್ರ್ಯದ ಬಾವುಟವನ್ನು ಹಾರಿಸಿದ ಈ ಸುದಿನವನ್ನು ನೆನಪಿಸುವ ಕಾರ್ಯಕ್ರಮ ಅಮರ ಸುಳ್ಯ ಸ್ವಾತಂತ್ರ್ಯ ಸಮರ -1837 ಸಂಸ್ಮರಣಾ ದಿನ.

ಈ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭಾಗವಹಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಡಾ. ಕೆ. ವಿ ರಾಜೇಂದ್ರ, ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾದ ಎ ಸಿ ವಿನಾಯರಾಜ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!