- Advertisement -
- Advertisement -






ಬೆಂಗಳೂರು : ರಾಜ್ಯದಲ್ಲಿ 108ರ ಅಧೀನದಲ್ಲಿ ಬರುವ ಒಟ್ಟು 715 ಆ್ಯಂಬುಲೆನ್ಸ್ಗಳ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲು 112 ಎನ್ಜಿ-ಇಆರ್ಎಸ್ಎಸ್ ತಂತ್ರಾಂಶ ಬಳಿಸಿಕೊಳ್ಳಲಾಗುವುದು. ಹಾಗೆಯೇ ಜಿಲ್ಲಾಡಳಿತದ ಮುಖಾಂತರ ಆ್ಯಂಬುಲೆನ್ಸ್ ಗಳ ನಿರ್ವಹಣೆಯನ್ನು ವಿಕೇಂದ್ರೀಕರಣ ಮಾಡಲು ಪ್ರತಿ ಜಿಲ್ಲೆಗಳಲ್ಲಿಯೂ ಕಂಟ್ರೋಲ್ ಸೆಂಟರ್ಗಳು ಕಾರ್ಯನಿರ್ವಹಿಸಲಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದ್ದಾರೆ.
- Advertisement -