- Advertisement -
- Advertisement -
ಆಂಬುಲೆನ್ಸ್ ಟೈರ್ ಸಿಡಿದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು-ಕೊರಟಗೆರೆ ರಸ್ತೆಯ ಗೇರಹಳ್ಳಿ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬೈಕ್ ಸವಾರ ಮಂಜು(38) ಎಂದು ಗುರುತಿಸಲಾಗಿದೆ.
ಮೃತ ಮಂಜು ಕೊರಟಗೆರೆ ಪಟ್ಟಣದಲ್ಲಿ ಸ್ಟುಡಿಯೋ ಹೊಂದಿದ್ದ. ಚಲಿಸುತ್ತಿದ್ದ ಆಂಬುಲೆನ್ಸ್ ನ ಟೈರ್ ಸಿಡಿದ ಪರಿಣಾಮ ಅಫಘಾತ ನಡೆದಿದೆ. ಮುಂದೆ ಚಲಿಸುತ್ತಿದ್ದ ಬೈಕ್ ಗೆ ಟೈರ್ ಬಡಿದಿದೆ. ಟೈರ್ ಸಿಡಿದಂತೆ ರಸ್ತೆ ಬದಿಯ ಕಲ್ಲಿಗೆ ಬೈಕ್ ಸವಾರ ಹೋಗಿ ಬಿದ್ದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿದ್ದ ರವಿ ಎಂಬ ಮತ್ತೋರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -