- Advertisement -
- Advertisement -
ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಿವಾಸಿ ರಾಜು(45) ನಿನ್ನೆ ಮೃತಪಟ್ಟಿದ್ದರಿಂದ ಮೃತದೇಹವನ್ನು ಬೆಂಗಳೂರಿನಿಂದ ಕಲಬುರಗಿಗೆ ಸಾಗಿಸುವಾಗ ಅವಘಡ ಸಂಭವಿಸಿದೆ.
ಚಾಲಕನಿಗೆ ಗಾಯವಾಗಿದ್ದು ಇತರರು ಅದೃಷ್ಟವಶಾತ್ ಪಾರಾಗಿದ್ದಾರೆ. ಘಟನೆ ಬಳಿಕ ಬೇರೆ ವಾಹನದಲ್ಲಿ ಕುಟುಂಬಸ್ಥರು ಶವ ಸಾಗಿಸಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
- Advertisement -