- Advertisement -
- Advertisement -



ಆಂಬುಲೆನ್ಸ್ ವಾಹನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಸಿಂಗೋನಹಳ್ಳಿ ಅಗ್ರಹಾರ ಗೇಟ್ ಬಳಿ ಸಂಭವಿಸಿದೆ.
ಮೃತನನ್ನು ಮುಳಬಾಗಿಲಿನ ಶ್ರೀಕಾಂತ (26) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಶವವನ್ನು ಮಂಗಳೂರಿಗೆ ತಲುಪಿಸಿ, ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಜತೆಯಲ್ಲಿದ್ದ ಮತ್ತೊಬ್ಬ ಚಾಲಕ ವೆಂಕಟೇಶ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -