Saturday, June 28, 2025
spot_imgspot_img
spot_imgspot_img

ಮಂಗಳೂರು: ಆ್ಯಂಬುಲೆನ್ಸ್ ಪಲ್ಟಿ ! ರೋಗಿ ಮೃತ್ಯು, ಇಬ್ಬರು ಗಂಭೀರ

- Advertisement -
- Advertisement -

ಮಂಗಳೂರು : ಪುತ್ತೂರಿನ ಆಂಬುಲೆನ್ಸ್ ವೊಂದು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಮಂಗಳೂರಿನಲ್ಲಿ ಪಲ್ಟಿಯಾದ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ಹೃದ್ರೋಗಿಯೊಬ್ಬರು ಮೃತ ಪಟ್ಟ ಘಟನೆ ಇಂದು ಬೆಳಿಗ್ಗೆ ಮುಂಜಾನೆ ನಡೆದಿದೆ.

ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ.

ಹಳೆನೇರೆಂಕಿ ಗ್ರಾಮ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ ಸ್ಟೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ, ರಮೇಶ್ ರೈ ಎಂಬವರು ತನ್ನ ಕಾರಿನಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾಸಪ್ಪ ರೈ ಅವರನ್ನು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಇನ್ನೊವಾ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು ಎಂದು ತಿಳಿದು ಬಂದಿದೆ.

ಆದರೆ ಆಂಬುಲೆನ್ಸ್ ಫಸ್ಟ್ ನ್ಯೂರೋ ಆಸ್ಪತ್ರೆಯ ಸಮೀಪ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ದಾಸಪ್ಪ ರೈ ಸ್ಥಳದಲ್ಲೇ ಮೃತಪಟ್ಟಿದ್ದು ಅವರ ಪತ್ನಿ ನಳಿನಿ ರೈ ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!