Friday, June 27, 2025
spot_imgspot_img
spot_imgspot_img

ನೆಲ್ಯಾಡಿ: ಆಂಬ್ಯುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ: ಆಂಬ್ಯುಲೆನ್ಸ್‌ ಚಾಲಕನಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಆಂಬ್ಯುಲೆನ್ಸ್ ಮತ್ತು ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ ಚಾಲಕ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಎಂಬಲ್ಲಿ ಶನಿವಾರ ನಡೆದಿದೆ.

ಗಾಯಗೊಂಡ ಆಂಬ್ಯುಲೆನ್ಸ್ ಚಾಲಕನನ್ನು ಮುಸ್ತಾಫ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇದರಿಂದ ಎರಡೂ ವಾಹನಗಳು ಜಖಂಗೊಂಡಿವೆ. ಅಪಘಾತದ ಸಂದರ್ಭ ಕೆಲ ಕಾಲ ಹೆದ್ದಾರಿ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!