- Advertisement -
- Advertisement -
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ.ಧೋನಿ ನಿವೃತ್ತಿ ಬಳಿಕ ಹಲವು ಗಣ್ಯರು ಸೋಷಿಯಲ್ ಮೀಡಿಯಾಗಳ ಮೂಲಕ ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತಿದ್ದಾರೆ. ಹಾಗೇ..ಇನ್ನು ಮುಂದೆ ಧೋನಿ ಆಟವನ್ನು ಮಿಸ್ ಮಾಡಿಕೊಳ್ಳುವುದಾಗಿ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಅಮಿತ್ ಷಾ ಅವರೂ ಕೂಡ ಎರಡು ಟ್ವೀಟ್ ಮಾಡಿ, ಮಾಹಿ..ಇನ್ನು ಮುಂದೆ ನಿಮ್ಮ ಹೆಲಿಕಾಪ್ಟರ್ ಶಾಟ್ನ್ನು ಇಡೀ ವಿಶ್ವ ಕ್ರಿಕೆಟ್ ಲೋಕ ಮಿಸ್ ಮಾಡಿಕೊಳ್ಳಲಿದೆ ಎಂದು ಹೇಳಿದ್ದಾರೆ.ಭಾರತೀಯ ಕ್ರಿಕೆಟ್ ಕ್ಷೇತ್ರಕ್ಕೆ ಸಾಟಿಯಿಲ್ಲದಷ್ಟು ಕೊಡುಗೆ ನೀಡಿದ ಎಂ.ಎಸ್.ಧೋನಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿರುವ ವಿಶ್ವದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಲ್ಲಿ ನಾನೂ ಒಬ್ಬ. ಧೋನಿಯವರ ಶಾಂತ ಸ್ವಭಾವದಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಅದೆಷ್ಟೋ ಸಹಾಯವಾಗಿದೆ. ಅವರ ನಾಯಕತ್ವದಲ್ಲಿ ಭಾರತ ಎರಡು ಬಾರಿ ವಿಶ್ವಕಪ್ ಗೆದ್ದಿದೆ ಎಂದು ನೆನಪಿಸಿಕೊಂಡರು.
- Advertisement -