Monday, June 30, 2025
spot_imgspot_img
spot_imgspot_img

ಪಡುಬಿದ್ರಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ : ಅದೃಷ್ಟವಶಾತ್‌ ಚಾಲಕ ಅಪಾಯದಿಂದ ಪಾರು

- Advertisement -
- Advertisement -

ಪಡುಬಿದ್ರಿ: ಕಾರೊಂದು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಚರಂಡಿಯ ದಂಡೆಗೆ ಡಿಕ್ಕಿಯಾಗಿ ಮಗುಚಿ ಬಿದ್ದ ಘಟನೆ ಬಡಾ ಎರ್ಮಾಳು ಅಪೂರ್ವ ಲಾಡ್ಜ್ ಮುಂಭಾಗ ನಡೆದಿದೆ.

ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು ಮರಳಿ ಉಡುಪಿಗೆ ಹಿಂದಿರುಗಿ ಹೋಗುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿಗಳು ಸಹಿತ ಪೊಲೀಸರು ಹೆದ್ದಾರಿಗಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗಳಿಸಿ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಕ್ತವಾಗಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!