ಪೊಲೀಸರಿಗೊಪ್ಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು



ವೇಣೂರು: ಹಿಂದೂ ವಿದ್ಯಾರ್ಥಿನಿಯರನ್ನು ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಅನ್ಯಕೋಮಿನ ವಿಕೃತ ಕಾಮಿ ಯುವಕನನ್ನು ಹಿಡಿದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅನ್ಯಕೋಮಿನ ಯುವಕನನ್ನು ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮಿಶಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಎಂದು ತಿಳಿದುಬಂದಿದೆ.
ವೇಣೂರಿನ ಗೋಳಿಯಂಗಡಿಯಲ್ಲಿರುವ ಪ್ರತಿಷ್ಠಿತ ಧರ್ಮಸ್ಥಳ ಐ ಟಿ ಐ ಕಾಲೇಜಿಗೆ ಹೋಗುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಜೊತೆ ಅವ್ಯಾಚ್ಯ ಶಬ್ದಗಳಿಂದ ಮಾತನಾಡುತ್ತಾ, ನಿಮ್ಮ ಮೊಬೈಲ್ ನಂಬರ್ ಕೊಡಿ ನಿಮ್ಮನು ದಿನಾ ಬೈಕಿನಲ್ಲಿ ಕಾಲೇಜಿಗೆ ಡ್ರಾಪ್ ಮಾಡುತ್ತೇನೆ ಎಂದು ಪೀಡಿಸುತ್ತಿದ್ದ. ಇದರಿಂದ ಗಾಬರಿಗೊಂಡ ಯುವತಿಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ತಿಳಿಸಿದ್ದು, ಈ ಕೂಡಲೇ ಧಾವಿಸಿದ ಕಾರ್ಯಕರ್ತರು ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮಿಶಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಎಂಬ ಅನ್ಯಕೋಮಿನ ವಿಕೃತ ಕಾಮಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.