- Advertisement -
- Advertisement -



ಕಾಲೇಜಿನ 5ನೇ ಮಹಡಿಯಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ.
ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ರಾಹುಲ್ ಕುಟುಂಬ ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಮೃತ ವಿದ್ಯಾರ್ಥಿ ರಾಹುಲ್, ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ಮೇ.14) ಪರೀಕ್ಷೆಗೆ ರಾಹುಲ್ ತಡವಾಗಿ ಬಂದಿದ್ದು, ಈ ವಿಚಾರವಾಗಿ ಕಾಲೇಜಿನಲ್ಲಿ ರಾಹುಲ್ನನ್ನು ನಿಂದಿಸಿರುವ ಅನುಮಾನ ಇದೆ. ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -