Wednesday, May 15, 2024
spot_imgspot_img
spot_imgspot_img

ಹಳೇ ವೈಷಮ್ಯ; ಚೂರಿ ಇರಿದು ಯುವಕನ ಕೊಲೆ..!

- Advertisement -G L Acharya panikkar
- Advertisement -

ಹಳೇ ವೈಷಮ್ಯಕ್ಕೆ ರೌಡಿ ಶೀಟರ್​ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿ ಬಂಗಾರಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ.

ಹಳೇ ದ್ವೇಷ, ವೈಷಮ್ಯ ಮತ್ತು ಹಣಕಾಸಿನ ವ್ಯವಹಾರ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ. ದುಷ್ಕರ್ಮಿಗಳು ಮಂಜುನಾಥ್​ ಎದೆಗೆ ಚೂರಿ ಹಾಕಿ ಕೊಲೆ ಮಾಡಿದ್ದಾರೆ. ಕುಟುಂಬಸ್ಥರಿಂದಲೇ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಕೊಲೆ ನಡೆದ ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿಎಲ್ ಭೇಟಿ ನೀಡಿದ್ದಾರೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ, ವಿಕಾಸ್, ವೆಂಕಟಸ್ವಾಮಿ ಸೇರಿದಂತೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!