- Advertisement -
- Advertisement -
ವಿಟ್ಲ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಹಲ್ಲೆಗೊಳಗಾದವರು.
ರಸ್ತೆಯ ಚರಂಡಿಯ ಶುಚೀಕರಣದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅನಂತಾಡಿಯಲ್ಲಿ ಪಂಚಾಯತ್ ವತಿಯಿಂದ ಚರಂಡಿ ಶುಚಿತ್ವದ ವೇಳೆ ಅಧ್ಯಕ್ಷರಾದ ಗಣೇಶ್ ಪೂಜಾರಿಯವರು ಕೆಲಸ ಮಾಡಿಸುತ್ತಿದ್ದ ವೇಳೆ ಸ್ಥಳೀಯರ ತಂಡವೊಂದರ ಮಧ್ಯೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.
ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಣೇಶ್ ಪೂಜಾರಿ ಅವರನ್ನು ಪುತ್ತೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -