Sunday, June 29, 2025
spot_imgspot_img
spot_imgspot_img

ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು

- Advertisement -
- Advertisement -

ನವದೆಹಲಿ,ನ(11): ಪತ್ರಕರ್ತ​ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ.

2018ರ ಪ್ರಕರಣವೊಂದರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಬ್ ಗೋಸ್ವಾಮಿಯನ್ನ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.


ಬಿ-ರಿಪೋರ್ಟ್​ ಸಲ್ಲಿಸಲಾಗಿದ್ದ ಪ್ರಕರಣವನ್ನ ರಿ-ಓಪನ್ ಮಾಡಿ ತಮ್ಮನ್ನ ಬಂಧಿಸಿದ್ದನ್ನ ಪ್ರಶ್ನಿಸಿ ಅರ್ನಬ್ ಮುಂಬೈ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನ ಕೋರ್ಟ್​ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಅರ್ನಬ್ , ತಮಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಅರ್ನಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದೆ.

53 ವರ್ಷದ ಇಂಟೀರಿಯರ್ ಡಿಸೈನರ್‌ನನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ರಾಯಗಡ್ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ನವೆಂಬರ್ 4 ರಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.

- Advertisement -

Related news

error: Content is protected !!