Saturday, June 20, 2026
spot_imgspot_img
spot_imgspot_img

ಗುಂಡಿ ತೆಗೆಯುತ್ತಿದ್ದ ವೇಳೆ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತು ಪತ್ತೆ..! ಹಿತ್ತಳೆ, ತಾಮ್ರ, ಮಣ್ಣಿನ ವಸ್ತುಗಳು ಲಭ್ಯ..!

- Advertisement -
- Advertisement -

ರಾಮನಗರ ಮಾಗಡಿ ತಾಲೂಕಿನ ಕಣ್ಣೂರು ಗ್ರಾಮದ ಮಕ್ಕಳ ದೇವರ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆಯಾಗಿವೆ. ಜಮೀನಿನಲ್ಲಿ ಇದ್ದ ತೆಂಗಿನ ಸಸಿಗಳಿಗೆ ನೀರಾವರಿ ಪೈಪ್ ಗಳನ್ನ ಅಳವಡಿಸಲು ಜೆಸಿಬಿ ಮೂಲಕ ಜಮೀನಿನಲ್ಲಿ ಗುಂಡಿ ತೆಗೆಯುತ್ತಿದ್ದ ವೇಳೆ ಇದ್ದಕಿದ್ದಂತೆ ಭೂಮಿ ಕುಸಿದಿದೆ. ಹತ್ತು ಆಡಿ ಆಳಕ್ಕೆ ಗುಂಡಿ ಕಂಡು ಬಂದಿದ್ದು ಪರಿಶೀಲನೆ ನಡೆಸಿದಾಗ ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ.

ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿದ್ದು ಇದು ಎಲ್ಲರ ಕೂತುಹಲಕ್ಕೂ ಕಾರಣವಾಗಿದೆ. ಶ್ರೀಮಠದ ಸ್ವಾಮೀಜಿಯೊಬ್ಬರು ಲೋಕಕಲ್ಯಾಣಕ್ಕಾಗಿ ತಪಗೈದು ಜೀವಂತ ಸಮಾಧಿಯಾಗಿರಬಹುದು. ಈ ವೇಳೆ ಈ ವಸ್ತುಗಳನ್ನ ಬಳಸಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀ ಮಠ ಪುರಾತನ ಮಠವಾಗಿದ್ದು ನೂರಾರು ವರ್ಷಗಳ ಇತಿಹಾಸವಿದೆ. ಮಠದ ಜಮೀನಿನಲ್ಲಿ ಸಿಕ್ಕಿರುವ ವಸ್ತುಗಳ ಮೇಲೆ ಹಳೆಗನ್ನಡದಲ್ಲಿ ಹೆಸರು ಸಹಾ ಬರೆಯಲಾಗಿದೆ.

ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಪಡೆದ ಕುದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಠದ ಮೃತ್ಯುಂಜಯ ಸ್ವಾಮೀಜಿಯವರಿಗೂ ಸೂಚನೆ ನೀಡಿದ್ದು, ಪುರಾತತ್ವ ಇಲಾಖೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸುವವರೂ ಯಾವುದೇ ವಸ್ತಗಳನ್ನ ಬಳಕೆ ಹಾಗೂ ಹಾಳು ಮಾಡದಂತೆ ಸೂಚಿಸಿದ್ದಾರೆ.

- Advertisement -

Related news

error: Content is protected !!