Saturday, April 27, 2024
spot_imgspot_img
spot_imgspot_img

ಬೆಂಗಾವಲು ವಾಹನ ಅಪಘಾತ : ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅಪಾಯದಿಂದ ಪಾರು

- Advertisement -G L Acharya panikkar
- Advertisement -

ವಿಜಯವಾಡ : ದನವೊಂದು ರಸ್ತೆಗೆ ಅಡ್ಡ ಬಂದ ಹಿನ್ನೆಲೆಯಲ್ಲಿ ಅಂದ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಂಚರಿಸುತಿದ್ದ ಬೆಂಗಾವಲು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಪಾಯದಿಂದ ಪಾರಾಗಿದ್ದಾರೆ.

ನಾಯ್ಡು ಅವರು ವಿಜಯವಾಡದಿಂದ ಹೈದರಾಬಾದ್​ಗೆ ತೆರಳುವಾಗ ಘಟನೆ ನಡೆದಿದೆ. ಮಾರ್ಗ ಮಧ್ಯೆ ಬಿಡಾಡಿ ದನವೊಂದು ದಿಢೀರನೆ ರಸ್ತೆಗೆ ಅಡ್ಡಲಾಗಿ ಬಂದಿದ್ದರಿಂದ ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಸ್ಕಾರ್ಟ್​ ವಾಹನದ ಚಾಲಕ ತಕ್ಷಣ ಬ್ರೇಕ್​ ಹಾಕಿದ್ದಾರೆ. ಈ ವೇಳೆ ಹಿಂಬದಿಯಿದ್ದ ಬೆಂಗಾವಲು ವಾಹನ ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಬಾನೆಟ್​ ಸಂಪೂರ್ಣ ಜಖಂಗೊಂಡಿದ್ದು , ಅದೃಷ್ಟವಶಾತ್​ ನಾಯ್ಡು ಅವರು ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!