- Advertisement -
- Advertisement -
ವಿಜಯವಾಡ : ದನವೊಂದು ರಸ್ತೆಗೆ ಅಡ್ಡ ಬಂದ ಹಿನ್ನೆಲೆಯಲ್ಲಿ ಅಂದ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಂಚರಿಸುತಿದ್ದ ಬೆಂಗಾವಲು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಪಾಯದಿಂದ ಪಾರಾಗಿದ್ದಾರೆ.
ನಾಯ್ಡು ಅವರು ವಿಜಯವಾಡದಿಂದ ಹೈದರಾಬಾದ್ಗೆ ತೆರಳುವಾಗ ಘಟನೆ ನಡೆದಿದೆ. ಮಾರ್ಗ ಮಧ್ಯೆ ಬಿಡಾಡಿ ದನವೊಂದು ದಿಢೀರನೆ ರಸ್ತೆಗೆ ಅಡ್ಡಲಾಗಿ ಬಂದಿದ್ದರಿಂದ ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಸ್ಕಾರ್ಟ್ ವಾಹನದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂಬದಿಯಿದ್ದ ಬೆಂಗಾವಲು ವಾಹನ ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಬಾನೆಟ್ ಸಂಪೂರ್ಣ ಜಖಂಗೊಂಡಿದ್ದು , ಅದೃಷ್ಟವಶಾತ್ ನಾಯ್ಡು ಅವರು ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Advertisement -