Sunday, June 29, 2025
spot_imgspot_img
spot_imgspot_img

‘ರಾಮಮಂದಿರ ನಿರ್ಮಾಣಕ್ಕೆ ಒಂದೂ ಪೈಸೆ ಕೊಡಬೇಡಿ’ – ಪಿಎಫ್‍ಐ ಪ್ರ.ಕಾರ್ಯದರ್ಶಿ ಅನಿಸ್ ಅಹಮ್ಮದ್

- Advertisement -
- Advertisement -

ಮಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಒಂದೂ ಪೈಸೆ ಕೊಡಬೇಡಿ. ಅದು ರಾಮಮಂದಿರ ಅಲ್ಲ, ಆರ್‌ಎಸ್‍ಎಸ್ ಮಂದಿರ’ ಎಂದು ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಅನಿಸ್ ಅಹಮ್ಮದ್ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಉಳ್ಳಾಲದಲ್ಲಿ ನಡೆದ ’ಯುನಿಟಿ ಮಾರ್ಚ್‌’ನಲ್ಲಿ ಅನಿಸ್‌ ಅಹಮ್ಮದ್‌ ಮಾಡಿರುವ ಭಾಷಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ‘ರಾಮಮಂದಿರ ದೇಣಿಗೆ ಸಂಗ್ರಹಿಸಲು ನಿಮ್ಮ ಮನೆ ಬಾಗಿಲಿಗೆ ಬಂದರೆ ಹಣ ಕೊಡಬೇಡಿ’ ಎಂದು ಹೇಳಿದ್ದಾರೆ.

ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಬಿಟ್ಟು ಕೊಡಿ ಎಂದಿದ್ದರು. ಈಗ ಜಾಗ ಬಿಟ್ಟು ಕೊಟ್ಟಾಯ್ತು. ಆದರೆ ದೇಶದಲ್ಲಿ ಶಾಂತಿ ಸ್ಥಾಪನೆ ಆಯ್ತಾ? ಇನ್ನೂ ದೌರ್ಜನ್ಯ ನಡೆಯುತ್ತಲೇ ಇದೆ. ಹಿಂದೂ ವಿರೋಧಿ ಸಂಘಟನೆ ನಮ್ಮದಲ್ಲ, ಆರ್.ಎಸ್‍.ಎಸ್ ಹಿಂದೂ ವಿರೋಧಿ ಸಂಘಟನೆ ಎಂದು ಹೇಳಿದ್ದಾರೆ. ಆರ್.ಎಸ್‍.ಎಸ್ ಕ್ಯಾನ್ಸರ್ ಇದ್ದ ಹಾಗೆ. ಅದು ವಾಸಿ ಆಗಲ್ಲ. ಪಿಎಫ್‍ಐನ ಶತ್ರುತ್ವ ಏನೇ ಇದ್ದರೂ ಆರ್.ಎಸ್‍.ಎಸ್ ಜೊತೆ ಮಾತ್ರ ಎಂದಿದ್ದಾರೆ.

ಅನುಮತಿ ಪಡೆಯದೇ ‘ಯುನಿಟಿ ಮಾರ್ಚ್‌‘ ನಡೆಸಿರುವುದು, ಅನ್ಯ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗುವ ರೀತಿ ಘೋಷಣೆ ಕೂಗಿರುವುದು ಹಾಗೂ ಪೊಲೀಸರ ಆದೇಶವನ್ನು ಉಲ್ಲಂಘಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

- Advertisement -

Related news

error: Content is protected !!