- Advertisement -
- Advertisement -
ಅಂಕೋಲ: ಅಂಕೋಲದ ಮಾಸ್ತಿಕಟ್ಟೆಯಲ್ಲಿ ಚಾಲಕನ ಅಜಾಗರೂಕತೆಯಿಂದ ಕೆಟ್ಟು ನಿಂತಿದ್ದ ಲಾರಿಗೆ ಹಿಂಭಾಗದಿಂದ ಆನಂದ್ ಟ್ರಾವೆಲ್ಸ್ ಬಸ್ ಗುದ್ದಿ ಭೀಕರ ಅಪಘಾತವಾದ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಐದು ಜನ ಗಂಭೀರ ಗಾಯಗೊಂಡು ಓರ್ವ ಸಾವನ್ನಪ್ಪಿದ್ದಾನೆ.ಮೃತ ವ್ಯಕ್ತಿಯ ಗುರುತು ಪತ್ತೆಯಾಗಬೇಕಿದ್ದು ಗಾಯಗೊಂಡವರಿಗೆ ಅಂಕೋಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ 30 ಜನ ಪ್ರಯಾಣಿಕರನ್ನು ಕರೆದೊಯ್ಯುತಿತ್ತು.ಚಾಲಕನ ಆಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣವಾಗಿದ್ದು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -