- Advertisement -
- Advertisement -
ಚೆನ್ನೈ: ಕರ್ನಾಟಕದಲ್ಲಿ ದಕ್ಷ ಅಧಿಕಾರಿ,ಸಿಂಗಂ,ಖಡಕ್ ಅಧಿಕಾರಿ ಎಂದು ಜನಮನ್ನಣೆ ಗಳಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಮಲೈ ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈಗ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯ ಕಾರ್ಯದಲ್ಲಿ ತೊಡಗಿಕೊಂಡಿರುವ ಅವರು ಇಂದು ಕೃಷಿ ಮಸೂದೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಪ್ರಯತ್ನ ನಡೆಸಿದ್ದಾರೆ.
ಟ್ವೀಟ್ ಮಾಡಿರುವ ಅವರು ಮೂರು ಹೊಸ ಕೃಷಿ ಕಾಯ್ದೆಗಳ ಕುರಿತು ರೈತರು ಮತ್ತು ಕೃಷಿ ಸಂಘಗಳ ಸದುಪಯೋಗದ ಬಗ್ಗೆ ಈರೋಡ್ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಕೃಷಿ ಮಸೂದೆಗಳ ಬಗ್ಗೆ ತಮಿಳು ನಾಡಿನ ಜನತೆಗೆ ಸ್ಪಷ್ಟ ಚಿತ್ರಣ ಸಿಕ್ಕಿದೆ. ಪ್ರತಿಯೊಬ್ಬ ರೈತನೂ ಕೂಡ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆಗಳ ಬಗ್ಗೆ ಮೆಚ್ಚುಗೆಯನ್ನು ಹೊಂದಿದ್ದಾನೆ ಎಂದಿದ್ದಾರೆ.
- Advertisement -