- Advertisement -
- Advertisement -
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರವರು ಸದ್ಯ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಅಣ್ಣಾಮಲೈ ರವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ದಿಟ್ಟ ಪೊಲೀಸ್ ಅಧಿಕಾರಿ ಎಂದು ಹೆಸರು ಗಳಿಸಿ, ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ರವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತಮಿಳುನಾಡು ಪೊಲೀಸರು ಅವರಿಗೆ ವೈ ಪ್ಲಸ್ ಭದ್ರತೆ ನೀಡಿದ್ದಾರೆ.
- Advertisement -