ವಿಟ್ಲ: ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2022 -23 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ದ. ಕ. ಜಿ. ಪ. ಹಿ. ಪ್ರಾ ಶಾಲೆ, ಮಜಿ – ವೀರಕಂಭದಲ್ಲಿ ನಡೆಯಿತು
ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ವೀರಪ್ಪ ಮೂಲ್ಯ ಬೆತ್ತಸರವು ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಕೆಎಂಎಫ್ ವಿಸ್ತರಣಾಧಿಕಾರಿ ಪ್ರಪ್ಪುಲ್ಲ, ಸಂಘದ ಉಪಾಧ್ಯಕ್ಷೆ ಶ್ರೀಮತಿ ತೇಜಾಕ್ಷಿ, ನಿರ್ದೇಶಕರುಗಳಾದ ಪದ್ಮನಾಭ ಬಂಗೇರ ಮಜಿ ,ನಾರಾಯಣ ಮೂಲ್ಯ, ಜಯಶೀಲ ಆಳೃ, ಉಮೇಶ ಮಜಿ, ಪದ್ಮನಾಭ ಗೌಡ ಮೈರ, ಆನಂದ ಮೂಲ್ಯ ಮೈರ, ಉಮಾವತಿ ಮಜಿ, ಕೇಶವ ನಾಯ್ಕ ಉಪಸ್ಥಿತರಿದ್ದರು.
ಪ್ರಸಕ್ತ ಸಾಲಿನಲ್ಲಿ ಸದಸ್ಯರಿಗೆ ಶೇಕಡಾ 15 ಡಿವಿಡೆಂಟ್ ಹಾಗೂ ಹಾಲು ಉತ್ಪಾದಕರಿಗೆ ಲೀಟರಿಗೆ 62 ಪೈಸೆಯಂತೆ ಬೋನಸ್ ನೀಡಲಾಗುವುದೆಂದು ಅಧ್ಯಕ್ಷರು ತಿಳಿಸಿದರು.
ಸಂಘಕ್ಕೆ ಹಾಲು ಪೂರೈಸುತ್ತಿರುವ ಸದಸ್ಯರಿಗೆ ಪ್ರೋತ್ಸಾಹಕ ಉಡುಗೊರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆಎಂಎಫ್ ವಿಸ್ತರಣಾಧಿಕಾರಿ ಪ್ರಪ್ಪುಲ್ಲ ರವರು ಹಾಲಿನ ಗುಣಮಟ್ಟ ಹಾಗೂ ಪಶು ಸಾಕಣೆ ಬಗ್ಗೆ ರೈತರಿಗೆ ಕೆ ಎಂ ಎಫ್ ಹಾಗೂ ಸರಕಾರದಿಂದ ಹೈನುಗಾರಿಕೆಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
S. S. L. C ಹಾಗೂ P. U. Cಯಲ್ಲಿ 80 ಶೇಕಡಕ್ಕಿಂತ ಕ್ಕಿಂತ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ಪುರಸ್ಕರಿಸಲಾಯಿತು.
ಸಂಘದ ವರದಿಯನ್ನು ಕಾರ್ಯದರ್ಶಿ ಹರೀಶ್ ಬಂಗೇರ ವಾಚಿಸಿದರು.