Sunday, April 28, 2024
spot_imgspot_img
spot_imgspot_img

ವಿಟ್ಲ: ಕರ್ನಾಟಕ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರಿಂದ ಮತ್ತೊಂದು ಮಹತ್ವದ ಕಾರ್ಯಚರಣೆ : ಅಂತರ್‌ರಾಜ್ಯ ಕಳ್ಳ ಇಬ್ರಾಹಿಂ ಮುಜಾಂಬಿಲ್‌ ನ ಬಂಧನ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂಬ್ರ 127/2015 ಕಲಂ: 457,380. IPC ಪ್ರಕರಣದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಕ್ಯಾಂಕೊ ಕಾಲೊನಿ, ಬಾಯರ್ ಪದವು ನಿವಾಸಿ ಇಬ್ರಾಹಿಂ ಮುಜಾಂಬಿಲ್ (28), ಎಂಬಾತನು, ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ದಿನಾಂಕ 27/3/24 ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು (L&O) ವಿಧ್ಯಾ ಮತ್ತು ಸಿಬ್ಬಂದಿಯವರಾದ ASI ಜಯರಾಮ, PC ಆಶೋಕ ಹಾಗೂ HC ರಾಧಾಕೃಷ್ಣ (ಪುತ್ತೂರು ನಗರ ಠಾಣೆ ) ರವರುಗಳ ತಂಡ, ಪುತ್ತೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯವು ಆರೋಪಿಗೆ ದಿನಾಂಕ 08-04-24ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈತನ ವಿರುದ್ದ ವಿಟ್ಲ ಠಾಣೆಯಲ್ಲಿ-02, ಕೇರಳ ಮಂಜೇಶ್ವರ ಠಾಣೆಯಲ್ಲಿ-01 ,ಪುತ್ತೂರು ನಗರ ಠಾಣೆ-01 ,ಅಂಧ್ರಪ್ರದೇಶದ ವಿಶಾಖಪಟ್ಟಣ ಠಾಣೆ-01 ಪ್ರಕರಣಗಳು ದಾಖಲಾಗಿರುತ್ತದೆ.

- Advertisement -

Related news

error: Content is protected !!