ಬೆಳ್ತಂಗಡಿ: ಇಲ್ಲಿನ ಮತ ಎಣಿಕೆ ಕೇಂದ್ರದ ಹೊರಗೆ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಎಸ್ ಡಿಪಿಐ ಸದಸ್ಯರು ಪಾಕಿಸ್ಥಾನದ ಪರ ಘೋಷಣೆ ಕೂಗಿರುವ ವಿಷಯ ಬೆಳಕಿಗೆ ಬಂದಿದೆ.
ಮತ ಎಣಿಕೆ ಕೇಂದ್ರದ ಹೊರಗೆ ಹಲವಾರು ರಾಜಕೀಯ ಪಕ್ಷಗಳ ಸಾವಿರಾರು ಕಾರ್ಯಕರ್ತರು ನೆರೆದಿದ್ದರು. ಒಂದೊಂದೇ ಕ್ಷೇತ್ರದ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತ ಹರ್ಷ ವ್ಯಕ್ತಪಡಿಸುತ್ತಿದ್ದರು
ಬಿಜೆಪಿ ಕಾರ್ಯಕರ್ತರು ತಮ್ಮ ಬೆಂಬಲಿತ ಅಭ್ಯರ್ಥಿಗಳು ವಿಜಯಿಯಾದಾಗ ಪಕ್ಷದ ಘೋಷಣೆ ಕೂಗೂತ್ತಾ, ಬಾವುಟ ಹಾರಿಸಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗೂತ್ತಾ ಬಿಜೆಪಿ ಕಾರ್ಯಕರ್ತರ ಬಳಿ ಬಂದರು. ಎರಡೂ ಪಕ್ಷದ ಬೆಂಬಲಿಗರ ಘೋಷಣೆಗಳು ತಾರಕಕ್ಕೇರಿದಾಗ ಎಸ್ ಡಿಪಿಐ ಕಡೆಯಿಂದ “ಪಾಕಿಸ್ಥಾನ ಜಂದಾಬಾದ್” ಎಂಬ ಘೋಷಣೆ ಕೇಳಿಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಗುಂಪು ಚದುರಿಸಿದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿ ಮತ ಎಣಿಕೆ ಕೇಂದ್ರದ ಬಳಿ ವಿಜಯೋತ್ಸವ ಆಚರಿಸದಂತೆ ತಾಕೀತು ಮಾಡಿದರು.