- Advertisement -
- Advertisement -
ಮಂಗಳೂರು: ಆ್ಯಂಕರ್ ಅನುಶ್ರೀ ವಿಚಾರಣೆ ಮುಕ್ತಾಯವಾಗಿದೆ.ಮೂರುವರೆ ಗಂಟೆಗಳ ಸತತ ವಿಚಾರಣೆ ನಡೆಸಿದ ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ನಡೆದ ವಿಚಾರಣೆ ನಡೆಯಿತು. ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ.ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ.ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ.ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ.
ಪೊಲೀಸರು ಇವತ್ತು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ,ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ.ಇವತ್ತು ಮುಂದಿನ ವಿಚಾರಣೆ ಬಗ್ಗೆ ಪೋಲಿಸರು ಏನೂ ಹೇಳಿಲ್ಲ.ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ.ಆ ಭೂತವನ್ನು ಹೋಗಲಾಡಿಸಲು ಪೋಲಿಸರು ಪ್ರಯತ್ನ ಮಾಡುತ್ತಿದ್ದಾರೆ.ಅವರಿಗೆ ನಾವು ಸಹಕಾರ ನೀಡಬೇಕು.ಪೊಲೀಸ್ ವಿಚಾರಣೆ ಬಳಿಕ ನಿರೂಪಕಿ ಅನುಶ್ರೀ ಹೇಳಿದ್ದಾರೆ.
- Advertisement -